ಅಭಿಪ್ರಾಯ / ಸಲಹೆಗಳು

ಇತಿಹಾಸ

                 ಕಳೆದ ದಶಕದಿಂದಲೂ ಕಲ್ಯಾಣ-ಕರ್ನಾಟಕ ಪ್ರಾಂತ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ರಚಿಸಬೇಕೆಂಬ ಕೂಗು ಇತ್ತು. ಕಾರಣ ಈ ಭಾಗವು ತನ್ನದೇ ಆದ ಕೃಷಿ ಮತ್ತು ಹವಾಮಾನ ವೈವಿಧ್ಯತೆಗಳನ್ನು ಹೊಂದಿದೆ. ಕಲ್ಯಾಣ-ಕರ್ನಾಟಕ ಪ್ರಾಂತ್ಯದ ಆರು ಜಿಲ್ಲೆಗಳಾದ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳನ್ನೊಳಗೊಂಡ ಈ ಭೂಭಾಗವು 12 ಲಕ್ಷ ಹೆಕ್ಟೇರುಗಳಷ್ಟು ಪ್ರದೇಶಕ್ಕೆ ತುಂಗಭದ್ರ, ಕೃಷ್ಣ, ಕಾರಂಜ, ಮುಲ್ಲಮಾರಿ, ಹಿರೇಹಳ್ಳ, ಬೆಣ್ಣೆ ತೊರೆ ಮತ್ತಿತರ ನೀರಾವರಿ ಯೋಜನೆಗಳು ನೀರುಣಿಸುತ್ತಿವೆ.

             ರಾಯಚೂರು ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಕುರಿತು ತಜ್ಞರನ್ನೊಳಗೊಂಡ ಸಮಿತಿಯು ಕೂಲಂಕುಷ ಅಧ್ಯಯನದ ನಂತರ 2008-09ರಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡಿತು. ಹೀಗೆ ಹೊಸ ಕೃಷಿ ವಿಶ್ವವಿದ್ಯಾಲಯವನ್ನು “ಹಸಿರೇ ಉಸಿರು” ಎಂಬ ಘೋಷಣೆಯ ಮೂಲಕ ಸ್ಥಾಪಿಸುವ ಕನಸು 22 ನವೆಂಬರ್, 2008ರಂದು ನನಸಾಯಿತು. ಅಲ್ಲಿಯವರೆಗೂ ಈ ವಿಶ್ವವಿದ್ಯಾಲಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಡಳಿತ ವ್ಯಾಪ್ತಿಗೆ ಒಳಪಟ್ಟಿತ್ತು.

         “ಬಿಸಿಲೂರು” ಎಂದು ಹೆಸರಾಗಿರುವ ರಾಯಚೂರು ಜಿಲ್ಲೆ ಇಂದು ಕರ್ನಾಟಕ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲೊಂದು, ಹಿಂದೆ ಮೌರ್ಯರು, ಕಾಕತೀಯರು, ವಿಜಯನಗರದ ಅರಸರು, ಬಹಮನಿ ಸುಲ್ತಾನರು ಮತ್ತು ಹೈದರಾಬಾದ್ ನಿಜಾಮರು ಆಳಿದ ನಾಡು, ಅಂದು ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಯಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮೆರೆದಿದ್ದ ನಾಡು, ಇಂದು ಕಲ್ಯಾಣ-ಕರ್ನಾಟಕ ಪ್ರದೇಶದ ಹಿಂದುಳಿದ ಜಿಲ್ಲೆಯೆಂದು ಹಣೆಪಟ್ಟಿಯಿಂದ 371(ಜೆ) ಯನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿದೆ. ಇದರ ಒಟ್ಟು ವಿಸ್ತೀರ್ಣ 44,138 ಚದರ ಕಿಲೋಮೀಟರಗಳು. ಜಿಲ್ಲೆಯಲ್ಲಿ ಕೃಷ್ಣ, ತುಂಗಭದ್ರೆÀ್ರಯರ ಕೃಪೆಯಿಂದ ಭತ್ತದ ಪೈರು ಭೂ-ರಮೆಗೆ ಹಸಿರು ಹೊದಿಸಿದಂತೆ ಸದಾ ಕಂಗೊಳಿಸುತ್ತಿರುತ್ತಾಳೆ. ರಾಯಚೂರು ಅರೇ ಉಷ್ಣವಲಯದ ಪ್ರದೇಶದಲ್ಲಿ ಬರುತ್ತಿದ್ದು, ಭೌಗೋಳಿಕವಾಗಿ ಸಮುದ್ರ ಮಟ್ಟದಿಂದ 389.5 ಮೀಟರ್ ಎತ್ತರದಲ್ಲಿದ್ದು, 16-120 ಉತ್ತರ ಅಕ್ಷಾಂಶ ಹಾಗೂ 76.240 ರೇಖಾಂಶಗಳನ್ನು ಹೊಂದಿದ್ದು, ಕರ್ನಾಟಕ ರಾಜ್ಯದ ಉತ್ತರ ಪೂರ್ವ ಒಣಪ್ರದೇಶ ಕೃಷಿ ವಲಯದಲ್ಲಿದೆ. ಜಿಲ್ಲೆಯ ಸರಾಸರಿ ಮಳೆಯ ಪ್ರಮಾಣ 620 ಮಿ.ಮಿ. ಜಿಲ್ಲೆಯ ಭೂಗರ್ಭವು ಗ್ರಾನೈಟಿಕ್ ಮುತ್ತು ಗ್ಲೈಸಿನ್‍ಗಳಿಂದ ಕೂಡಿದ್ದು, ಬಹಳಷ್ಟು ವ್ಯಾಪ್ತಿಯ ಆಳವಾದ ಕಪ್ಪು ಭೂಮಿಯಿಂದ, ಉಳಿದ ಭಾಗ ಕೆಂಪು ಭೂಮಿಯಿಂದ ಕೂಡಿರುತ್ತದೆ.

             ಕೊಠಾರಿ ಕಮಿಶನ್ ಶಿಫಾರಸ್ಸಿನಂತೆ, ಕರ್ನಾಟಕ ಸರ್ಕಾರವು ಕೃಷಿ ಇಂಜನಿಯರಿಂಗ್ ಡಿಪ್ಲೋಮಾ ಕೋರ್ಸನ್ನು ಸನ್ 1969ರಲ್ಲಿ ರಾಯಚೂರಿನಲ್ಲಿ ಸ್ಥಾಪಿಸಲು ಅನುಮತಿ ನೀಡಿತು. ಅಂದಿನ ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನ ಆಡಳಿತಾತ್ಮಕ ಅಧೀನದಲ್ಲಿದ್ದ ಈ ಕೋರ್ಸ ದೇಶದಲ್ಲಿಯೇ ಪ್ರಥಮ ಪ್ರಯೋಗವಾಗಿತ್ತು. ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಕೌಶಲ್ಯಯುತ ತಂತ್ರಜ್ಞರನ್ನಾಗಿ ಮಾಡಿ ಜೀವನೋಪಾಯಕ್ಕಾಗಿ ದಾರಿ ಮಾಡಿಕೊಡುವುದೇ ಇದರ ಉದ್ದೇಶವಾಗಿತ್ತು. ನಂತರ 1986ರಲ್ಲಿ ಕೃಷಿ ವಿಶ್ವವಿದ್ಯಾಲಯದ ಧಾರವಾಡದ ಅಧೀನದಲ್ಲಿ ಬಂದ ಈ ಸಂಸ್ಥೆ, ಔದ್ಯೋಗಿಕ ರಂಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ತಕ್ಕಂತೆ ಕೌಶಲ್ಯಯುತ ಪದವೀಧರರನ್ನು ತಯಾರು ಮಾಡುವ ಉದ್ದೇಶದಿಂದ 1987ರಲ್ಲಿ (ಕೃಷಿ ಇಂಜಿನಿಯರಿಂಗ್ ಡಿಪ್ಲೋಮಾ ಕೋರ್ಸನ್ನು ನಾಲ್ಕು ವರ್ಷದ ಬಿ.ಟೆಕ್ (ಕೃಷಿ ಇಂಜಿನಿಯರಿಂಗ್) ಪದವಿಗೆ ಮೇಲ್ದರ್ಜೆಗೇರಿಸಿ ಅನುಕ್ರಮವಾಗಿ ಎಲ್ಲ ಸೌಲಭ್ಯಗಳನ್ನು ಒಂದೊಂದಾಗಿ ರಚಿಸಲಾಯಿತು. ಸದ್ಯ ಇದು ದೇಶದಲ್ಲಿಯೇ ಒಂದು ಉತ್ತಮ ದರ್ಜೆಯ ಕೃಷಿ ತಾಂತ್ರಿಕ ಮಹಾವಿದ್ಯಾಲಯವೆಂದು ಹೆಗ್ಗಳಿಗೆ ಗಳಿಸಿಕೊಂಡಿದೆ. ಕೃಷಿ ಯಂತ್ರೋಪಕರಣ ಮತ್ತು ಶಕ್ತಿ ತಾಂತ್ರಿಕತೆ, ಮಣ್ಣು ಮತ್ತು ನೀರು ಸಂರಕ್ಷಣೆ ತಾಂತ್ರಿಕತೆ, ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನಗಳನ್ನೊಳಗೊಂಡ ಮೂರು ವಿಭಾಗಗಳಲ್ಲಿ ಸ್ನಾತಕೋತ್ತರ ಹಾಗೂ ಪಿ.ಹೆಚ್.ಡಿ ಪದವಿಯನ್ನು ಪ್ರಾರಂಭಿಸಲಾಗಿದ್ದು, ಅನೇಕ ರೈತೋಪಯೋಗಿ ತಂತ್ರಜ್ಞಾನಗಳು ವಿವಿಧ ವಿಭಾಗಗಳಿಂದ ಅನಾವರಣಗೊಂಡವು.

        1984ರಲ್ಲಿ ಪ್ರಾರಂಭವಾದ ಕೃಷಿ ಮಹಾವಿದ್ಯಾಲಯ, ರಾಯಚೂರು, ISಔ9001:2008 ಪ್ರಮಾಣ ಪತ್ರದೊಂದಿಗೆ ಗುರುತಿಸಿದ್ದು, ಈ ಮಹಾವಿದ್ಯಾಲಯದಿಂದ ಅನೇಕ ವಿದ್ಯಾರ್ಥಿಗಳು ಭಾರತೀಯ ಆಡಳಿತ ಸೇವೆಯಲ್ಲಿ ಸೇವೆ ಸಲ್ಲಿಸುತ್ತಿರುವುದು ಇದರ ಗುಣಮಟ್ಟಕ್ಕೆ ಸಾಕ್ಷಿ. ಈ ವಿಶ್ವವಿದ್ಯಾಲಯವು ಪ್ರಸ್ತುತ ನಾಲ್ಕು ಮಹಾವಿದ್ಯಾಲಯಗಳನ್ನು ಒಳಗೊಂಡಿದ್ದು, ಭೀಮರಾಯನಗುಡಿ ಮತ್ತು ಕಲಬುರಗಿಯಲ್ಲಿಯೂ ಸಹ ಕೃಷಿ ಮಹಾವಿದ್ಯಾಲಯಗಳು ಪ್ರಾರಂಭಗೊಂಡು ಸರ್ವತೋಮುಖ ಅಭಿವೃದ್ಧಿಗೆ ಕಾರಣೀಭೂತವಾಗಿವೆ. ರಾಯಚೂರು ಮುಖ್ಯ ಆವರಣದಲ್ಲಿ ವಿವಿಧ ವಿಭಾಗಗಳಲ್ಲಿ 16 ಸ್ನಾತಕೋತ್ತರ ಪದವಿ ಮತ್ತು 15 ಪಿ.ಎಚ್.ಡಿ ಪದವಿ  ಕಾರ್ಯಕ್ರಮಗಳು  ನಡೆಯುತ್ತಿವೆ. ಕೃಷಿ ಮತ್ತು ಕೃಷಿ ಇಂಜಿನಿಯರಿಂಗ್‍ನಲ್ಲಿ ಅನೇಕ ವಿದ್ಯಾರ್ಥಿಗಳು ಭಾರತೀಯ ಕೃಷಿ ಅನುಸಂಧಾನ ಪರಷತ್ ಶಿಷ್ಯವೇತನ ಪಡೆದಿರುತ್ತಾರೆ. ವಿವಿಧ ವಿಭಾಗಗಳಿಗೆ ವಿದ್ಯಾರ್ಥಿ ಮತ್ತು ಶಿಕ್ಷಕರ ಸಂಶೋಧನೆಗೆ ಉಪಯೋಗವಾಗುವ ಹೈ-ಟೆಕ್ ಉಪಕರಣಗಳನ್ನು ಖರೀದಿಸಲಾಗಿದೆ. ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆ ಕೌಶಲ್ಯಭಿವೃದ್ಧಿ ಕಾರ್ಯಕ್ರಮಗಳು ಅವರಲ್ಲಿ ಆತ್ಮವಿಶ್ವಾಸ ಮೂಡಿಸಿದೆ.

ಇತ್ತೀಚಿನ ನವೀಕರಣ​ : 05-10-2020 09:29 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080